ರಾಜ್ಯಸಭೆ ಎಲೆಕ್ಷನ್ ಬಳಿಕ ಮೋದಿ ಕ್ಯಾಬಿನೆಟ್ ಪುನಾರಚನೆಗೆ ಪ್ಲ್ಯಾನ್..

ಕೇಂದ್ರದ ಮೋದಿ ಕ್ಯಾಬಿನೆಟ್ (Modi Cabinet) ಕೂಡ ಜೂನ್ 15 ರಿಂದ 18 ರ ನಡುವೆ ಪುನಾರಚನೆ ಆಗುವ ಸಾಧ್ಯತೆ ಇದೆ.

 

ಮುಂಬರುವ ನಿರ್ಣಾಯಕ ವಿಧಾನಸಭಾ ಚುನಾವಣೆಗಳಿಗೆ ಮುನ್ನ ಬಿಜೆಪಿ ನಾಯಕತ್ವವು ರಾಜಕೀಯ ಮತ್ತು ಸಾಂಸ್ಥಿಕ ಪುನಾರಚನೆಗೆ ಸಿದ್ಧವಾಗ್ತಿದೆ. ಹೀಗಾಗಿ, ಹಲವಾರು ರಾಜ್ಯ ಸಚಿವರು ಸೇರಿದಂತೆ 1 ಡಜನ್‌ಗೂ ಹೆಚ್ಚು ಸಚಿವರನ್ನು ಕೈಬಿಡಬಹುದು ಅಥವಾ ಬದಲಾಯಿಸಬಹುದು ಎಂದು ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ:‌ ಭಾರತ – ಯುಎಸ್‌ ವ್ಯಾಪಾರ ಒಪ್ಪಂದ 99% ಪೂರ್ಣ – ಶೀಘ್ರದಲ್ಲೇ ಫೈನಲ್‌ ಡೀಲ್‌ ನಿರೀಕ್ಷೆ

 

 

ಪುನಾರಚನೆಯು 10-12 ಸಚಿವಾಲಯಗಳಲ್ಲಿ ನಾಯಕತ್ವ ಬದಲಾವಣೆಗಳನ್ನು ಒಳಗೊಂಡಿದ್ದು, ಹಲವಾರು ಸಚಿವರನ್ನು ವಿಭಿನ್ನ ಖಾತೆಗಳಿಗೆ ಮರು ನಿಯೋಜಿಸಲಾಗುವುದು ಎಂದು ನಿರೀಕ್ಷಿಸಲಾಗಿದೆ. ಎನ್‌ಡಿಎ ಮಿತ್ರಪಕ್ಷಗಳಾದ ಜೆಡಿಯು, ಟಿಡಿಪಿ, ಎನ್‌ಸಿಪಿ ಮತ್ತು ಆರ್‌ಎಲ್‌ಎಂಗಳು ಸಂಪುಟದಲ್ಲಿ ಪ್ರಾತಿನಿಧ್ಯವನ್ನು ಪಡೆಯಬಹುದು ಎನ್ನಲಾಗಿದೆ.

 

ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಪಂಕಜ್ ಚೌಧರಿ ಅವರನ್ನು ಉತ್ತರ ಪ್ರದೇಶಕ್ಕೆ ಬಿಜೆಪಿ ಮುಖ್ಯಸ್ಥರನ್ನಾಗಿ, ಕಾರ್ಪೊರೇಟ್ ವ್ಯವಹಾರಗಳು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಖಾತೆ ರಾಜ್ಯ ಸಚಿವ ಹರ್ಷ್ ಮಲ್ಹೋತ್ರಾ ಅವರನ್ನು ದೆಹಲಿ ಬಿಜೆಪಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಈ ಸ್ಥಾನಗಳನ್ನು ಸಂಸತ್ತಿನ ಎರಡೂ ಸದನಗಳ ಹೊಸಬರಿಗೆ ನೀಡುವ ನಿರೀಕ್ಷೆಯಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS