ನನ್ನ ನಿರ್ಧಾರ ತಿಳಿಸಿದ್ದೇನೆ, ಏನ್ ಮಾಡ್ತಾರೆ ನೋಡೋಣ – ಖಾತೆ ಬದಲಾವಣೆ ಗುಟ್ಟು ಬಿಡದ ರಾಮಲಿಂಗಾರೆಡ್ಡಿ..

ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ (D.K Shivakumar) ಅವರ ನೇತೃತ್ವದ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ಎರಡೇ ದಿನದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಖಾತೆ ಹಂಚಿಕೆ ವಿಚಾರದಲ್ಲಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ರಾಜೀನಾಮೆ ಪ್ರಹಸನ ಮುಂದುವರಿದಿದೆ. ಇದರ ಬೆನ್ನಲ್ಲೇ ರಾಮಲಿಂಗಾರೆಡ್ಡಿಯವರು ಮಾತನಾಡಿ, ನನ್ನ ನಿರ್ಧಾರ ಈಗಾಗಲೇ ತಿಳಿಸಿದ್ದೇನೆ, ಏನ್ ಮಾಡ್ತಾರೆ ನೋಡೋಣ ಎಂದು ತಿಳಿಸಿದ್ದಾರೆ.

 

ತಡರಾತ್ರಿಯವರೆಗೂ ರಾಮಲಿಂಗಾರೆಡ್ಡಿ ಮನವೊಲಿಸುವ ಪ್ರಯತ್ನವನ್ನು ಸಿಎಂ ಡಿ.ಕೆ ಶಿವಕುಮಾರ್‌ ಮಾಡಿದ್ದರು. ಕೆ.ಸಿ ವೇಣುಗೋಪಾಲ್ ಹಾಗೂ ರಣದೀಪ್ ಸುರ್ಜೇವಾಲಾ ಅವರಿಂದಲೂ ಮಾತನಾಡಿಸಿದ್ದರು. ಇದಾದ ಬಳಿಕ ಇಂದು ನಿರ್ಧಾರ ತಿಳಿಸ್ತೀನಿ ಎಂದು ರಾಮಲಿಂಗಾರೆಡ್ಡಿಯವರು ತಿಳಿಸಿ ಬಂದಿದ್ದರು. ಇದನ್ನೂ ಓದಿ: ರಾಮಲಿಂಗಾ ರೆಡ್ಡಿ ರಾಜೀನಾಮೆ ವಾಪಸ್‌? – ಸಿಎಂ ಡಿಕೆಶಿ ಸಂಧಾನ ಸಕ್ಸಸ್‌ ಆಯ್ತಾ?

 

ಬೆಂಬಲಿಗರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ:

ಬೆಳಗ್ಗೆ ತಮ್ಮ ನಿವಾಸಕ್ಕೆ ಬೆಂಬಲಿಗರನ್ನ ರೆಡ್ಡಿ ಅವರು ಕರೆಸಿಕೊಂಡಿದ್ದಾರೆ. ಮಾಜಿ ಮೇಯರ್ ಮಂಜುನಾಥ್ ರೆಡ್ಡಿ ಸೇರಿ ಹಲವರು ನಿವಾಸಕ್ಕೆ ಬಂದಿದ್ದಾರೆ. ಬೆಂಬಲಿಗರ ಜೊತೆ ಚರ್ಚಿಸಿ ಮುಂದಿನ ತಿರ್ಮಾನ ತಿಳಿಸುವ ಸಾಧ್ಯತೆ ಇದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS