ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (SIR) ಕಾಂಗ್ರೆಸ್ ಸರ್ಕಾರ ವ್ಯವಸ್ಥಿತವಾಗಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಮನಗರದಲ್ಲಿ (Ramanagara) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ (Congress Government) ಅಕ್ರಮಗಳ ವಿರುದ್ಧ ಚುನಾವಣಾ ಆಯೋಗಕ್ಕೆ ವಿಡಿಯೋ ಸಾಕ್ಷ್ಯ ಹಾಗೂ ದಾಖಲೆ ಸಮೇತ ದೂರು ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ರಾಹುಲ್ ಗಾಂಧಿಗೆ ಅರ್ಥವಾಗುವಂತೆ ಇಂಗ್ಲಿಷ್ನಲ್ಲೇ ಪ್ರೆಸ್ಮೀಟ್ ಮಾಡ್ತೀನಿ: ನಿಖಿಲ್ ಕಿಡಿ
ಅಕ್ರಮವಾಗಿ ಹೆಸರು ಸೇರ್ಪಡೆ
ರಾಜ್ಯದ ಹಲವು ಭಾಗಗಳಿಂದ ತಮಗೆ ಅಕ್ರಮದ ಬಗ್ಗೆ ಮಾಹಿತಿ ಬರುತ್ತಿದೆ, ಕಾಂಗ್ರೆಸ್ ಪಕ್ಷವು ತನ್ನ ಮತದಾರರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಲು ಅಕ್ರಮವಾಗಿ ಹೆಸರುಗಳನ್ನು ಸೇರಿಸುತ್ತಿದೆ. ಸಂವಿಧಾನದ ಬಗ್ಗೆ ಮಾತನಾಡುವ ಕಾಂಗ್ರೆಸ್ ರಾಜ್ಯಾಧ್ಯಕ್ಷರು ಮತ್ತು ಪ್ರಿಯಾಂಕ್ ಖರ್ಗೆ (Priyank Kharge) ಅವರು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂಬುದನ್ನು ನೋಡಲಿ ಎಂದು ಕುಟುಕಿದ್ದರೆ.










