ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಕೈದಿಗಳ ಪರಾರಿ, ಭದ್ರತೆ ಕುರಿತು ಪ್ರಶ್ನೆ

ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೂವರು ಶಿಕ್ಷೆ ಅನುಭವಿಸುತ್ತಿದ್ದ ಕೈದಿಗಳು ಪರಾರಿಯಾಗಿರುವ ಘಟನೆ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಜೈಲಿನ ಬ್ಯಾರಕ್‌ನ ಕಂಬಿಗಳನ್ನು ಕತ್ತರಿಸಿ, ಟವೆಲ್ ಹಾಗೂ ಹಾಸಿಗೆಯ ನೆರವಿನಿಂದ ಸುಮಾರು 15 ರಿಂದ 20 ಅಡಿ ಎತ್ತರದ ಕಾಂಪೌಂಡ್ ಗೋಡೆ ಹಾರಿ ತಪ್ಪಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಪರಾರಿಯಾದ ಕೈದಿಗಳನ್ನು ಮಸ್ತಾನ್, ಸಂತೋಷ್ ಮತ್ತು ಸಾಗರ್ ಎಂದು ಗುರುತಿಸಲಾಗಿದೆ. ಇವರು ಬೀದರ್ ಜಿಲ್ಲೆಯ ಕೊಲೆ ಪ್ರಕರಣವೊಂದರಲ್ಲಿ ಶಿಕ್ಷೆಗೆ ಗುರಿಯಾಗಿ ಕಲಬುರಗಿ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು. ಘಟನೆ ಜೈಲಿನ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಘಟನೆ ಸಂಬಂಧ ಫರತಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಕೈದಿಗಳ ಪತ್ತೆಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯ ಆರಂಭಿಸಿದ್ದಾರೆ. ಜೈಲು ಅಧಿಕಾರಿಗಳು ಕೂಡ ಘಟನೆ ಕುರಿತು ತನಿಖೆ ನಡೆಸುತ್ತಿದ್ದು, ಭದ್ರತಾ ಲೋಪಗಳ ಬಗ್ಗೆ ಪರಿಶೀಲನೆ ಮುಂದುವರಿದಿದೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS