11 ಮಾನದಂಡಗಳ ಪ್ರಕಾರ ಪಿಆರ್‌ಸಿ ವಿತರಣೆ: ಪರಮೇಶ್ವರ್

ಬೆಂಗಳೂರು: ಕೇಂದ್ರ ಸರ್ಕಾರ ಎಸ್‌ಐಆರ್ ಪ್ರಕ್ರಿಯೆ ಆರಂಭಿಸಿರುವ ಹಿನ್ನೆಲೆಯಲ್ಲಿ, 11 ಮಾನದಂಡಗಳ ಪ್ರಕಾರವೇ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್‌ಸಿ) ನೀಡಲು ತೀರ್ಮಾನಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ರಾಜ್ಯದಲ್ಲಿ ಮನೆ ಮನೆಗೆ ತೆರಳಿ ಉಚಿತ ಜಾತಿ ಪ್ರಮಾಣ ಪತ್ರ ವಿತರಣೆ” ಹಾಗೂ “ಶಾಶ್ವತ ನಿವಾಸ ಪ್ರಮಾಣಪತ್ರ ವಿತರಿಸುವ ಸೇವೆಯ ಆರಂಭ” ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶಾಶ್ವತ ನಿವಾಸಿ ಪ್ರಮಾಣಪತ್ರವನ್ನು ಮನೆಮನೆಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರವು ಜನರ ಸೇವೆ ಮಾಡಲು ಮತ್ತೊಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಪರಮೇಶ್ವರ್ ಹೇಳಿದರು. ಈ ಯೋಜನೆಯಿಂದ ಸಾರ್ವಜನಿಕರು ಕಚೇರಿಗಳಿಗೆ ಅಲೆದಾಡುವ ಅವಶ್ಯಕತೆ ಕಡಿಮೆಯಾಗಲಿದ್ದು, ಸರ್ಕಾರಿ ಸೇವೆಗಳು ನೇರವಾಗಿ ಮನೆಬಾಗಿಲಿಗೆ ತಲುಪಲಿವೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS