ನವದೆಹಲಿ: ಬಾಂಗ್ಲಾದೇಶದಲ್ಲಿ 2024ರ ಜುಲೈ–ಆಗಸ್ಟ್ ಅವಧಿಯಲ್ಲಿ ನಡೆದ ಚಳವಳಿ ಕೇವಲ ಶಾಂತಿಯುತ ವಿದ್ಯಾರ್ಥಿ ಹೋರಾಟವಾಗಿರಲಿಲ್ಲ ಎಂದು ಮಾಜಿ ಪ್ರಧಾನಿ ಶೇಖ್ ಹಸೀನಾ ಆರೋಪಿಸಿದ್ದಾರೆ. ಆಡಳಿತ ಬದಲಾವಣೆಗಾಗಿ ರೂಪಿಸಲಾಗಿದ್ದ ಸಂಘಟಿತ ಹಿಂಸಾತ್ಮಕ ರಾಜಕೀಯ ಅಸ್ತ್ರವಾಗಿತ್ತು ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
ನವದೆಹಲಿಯ ‘ಫಾರಿನ್ ಕರೆಸ್ಪಾಂಡೆಂಟ್ಸ್ ಕ್ಲಬ್ ಆಫ್ ಸೌತ್ ಏಷ್ಯಾ’ ಆಯೋಜಿಸಿದ್ದ ವರ್ಚುವಲ್ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಶೇಖ್ ಹಸೀನಾ, ಬಾಂಗ್ಲಾದೇಶ ಸಾಗುತ್ತಿರುವ ಪ್ರಸ್ತುತ ದಾರಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. ದೇಶದ ಬೆಳವಣಿಗೆಗಳು ನೋವುಂಟು ಮಾಡುತ್ತಿವೆ ಎಂದು ಹೇಳಿದ ಅವರು, ತಮ್ಮ ವಿರುದ್ಧದ ಕ್ರಮಗಳ ಬಗ್ಗೆಯೂ ಪ್ರತಿಕ್ರಿಯಿಸಿದರು.
ತಮಗೆ ಮರಣದಂಡನೆ ವಿಧಿಸಲಾಗಿದ್ದರೂ ಡಿಸೆಂಬರ್ನಲ್ಲಿ ಬಾಂಗ್ಲಾದೇಶಕ್ಕೆ ಮರಳುವುದಾಗಿ ಶೇಖ್ ಹಸೀನಾ ಘೋಷಿಸಿದ್ದಾರೆ. 2024ರ ಆಗಸ್ಟ್ 5ರಂದು ಭಾರತಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಅವರು ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ.










