ದೆಹಲಿ ಹೈಕಮಾಂಡ್‌ ಹಿಡಿತಕ್ಕೆ ರಾಜ್ಯ ಕಾಂಗ್ರೆಸ್‌: ವಿಜಯೇಂದ್ರ ಕಿಡಿ

ಸುದ್ದಿ ಮತ್ತು ಪ್ರಕಟಣೆಗಳಿಗಾಗಿ:
9000144466
kannadasakshi.in

ದೆಹಲಿ ಹೈಕಮಾಂಡ್‌ ಹಿಡಿತಕ್ಕೆ ರಾಜ್ಯ ಕಾಂಗ್ರೆಸ್‌: ವಿಜಯೇಂದ್ರ ಕಿಡಿ

05 Aug 2026, 11:15 pm KANNADA SAKSHI

ಬೆಂಗಳೂರು: ಸಚಿವರ ಆಯ್ಕೆಯಿಂದ ಹಿಡಿದು ಅವರಿಗೆ ಖಾತೆ ಹಂಚಿಕೆ ಮಾಡುವವರೆಗೂ ದೆಹಲಿಯ ಕಾಂಗ್ರೆಸ್‌ ಹೈಕಮಾಂಡ್‌ ಅನುಮೋದನೆ ಪಡೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು ಪದೇಪದೆ ದೆಹಲಿಗೆ ತೆರಳಿ ಹೈಕಮಾಂಡ್‌ ಒಪ್ಪಿಗೆ ಪಡೆಯುತ್ತಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅಪರೂಪದ ಬೆಳವಣಿಗೆ ಎಂದು ಅವರು ಟೀಕಿಸಿದ್ದಾರೆ.

ವಿಧಾನಸಭೆಯ ಸ್ಪೀಕರ್‌, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿ, ಉಪಸಭಾಪತಿ ಹುದ್ದೆಗಳ ವಿಚಾರದಲ್ಲೂ ಎಐಸಿಸಿ ಲೆಟರ್‌ಹೆಡ್‌ನಲ್ಲಿ ನಿರ್ದೇಶನ ನೀಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ವಿಧಾನಮಂಡಲದ ಪ್ರಮುಖ ಹುದ್ದೆಗಳ ಬಗ್ಗೆ ಹೊರಗಿನಿಂದ ನಿರ್ದೇಶನ ನೀಡುವುದು ಸರಿಯಾದ ಕ್ರಮವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಬೆಳವಣಿಗೆಗಳು ವಿಧಾನಮಂಡಲದ ಸ್ವಾಯತ್ತತೆಗೆ ಧಕ್ಕೆ ತರುವುದಲ್ಲದೆ, ಪ್ರಜಾಪ್ರಭುತ್ವದ ಮೌಲ್ಯಗಳಿಗೂ ಅಪಾಯ ಉಂಟುಮಾಡುತ್ತವೆ ಎಂದು ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಆಡಳಿತ ಮತ್ತು ವಿಧಾನಮಂಡಲದ ನಿರ್ಧಾರಗಳು ಸ್ವತಂತ್ರವಾಗಿ ನಡೆಯಬೇಕು ಎಂಬುದೇ ಸಂವಿಧಾನದ ಆಶಯವಾಗಿದ್ದು, ಹೈಕಮಾಂಡ್‌ ಹಸ್ತಕ್ಷೇಪದ ವಿರುದ್ಧ ಬಿಜೆಪಿ ಧ್ವನಿ ಎತ್ತಲಿದೆ ಎಂದು ಅವರು ತಿಳಿಸಿದ್ದಾರೆ.

Generating image…

ಬೆಂಗಳೂರು: ಸಚಿವರ ಆಯ್ಕೆಯಿಂದ ಹಿಡಿದು ಅವರಿಗೆ ಖಾತೆ ಹಂಚಿಕೆ ಮಾಡುವವರೆಗೂ ದೆಹಲಿಯ ಕಾಂಗ್ರೆಸ್‌ ಹೈಕಮಾಂಡ್‌ ಅನುಮೋದನೆ ಪಡೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು ಪದೇಪದೆ ದೆಹಲಿಗೆ ತೆರಳಿ ಹೈಕಮಾಂಡ್‌ ಒಪ್ಪಿಗೆ ಪಡೆಯುತ್ತಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅಪರೂಪದ ಬೆಳವಣಿಗೆ ಎಂದು ಅವರು ಟೀಕಿಸಿದ್ದಾರೆ.

ವಿಧಾನಸಭೆಯ ಸ್ಪೀಕರ್‌, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿ, ಉಪಸಭಾಪತಿ ಹುದ್ದೆಗಳ ವಿಚಾರದಲ್ಲೂ ಎಐಸಿಸಿ ಲೆಟರ್‌ಹೆಡ್‌ನಲ್ಲಿ ನಿರ್ದೇಶನ ನೀಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ವಿಧಾನಮಂಡಲದ ಪ್ರಮುಖ ಹುದ್ದೆಗಳ ಬಗ್ಗೆ ಹೊರಗಿನಿಂದ ನಿರ್ದೇಶನ ನೀಡುವುದು ಸರಿಯಾದ ಕ್ರಮವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಬೆಳವಣಿಗೆಗಳು ವಿಧಾನಮಂಡಲದ ಸ್ವಾಯತ್ತತೆಗೆ ಧಕ್ಕೆ ತರುವುದಲ್ಲದೆ, ಪ್ರಜಾಪ್ರಭುತ್ವದ ಮೌಲ್ಯಗಳಿಗೂ ಅಪಾಯ ಉಂಟುಮಾಡುತ್ತವೆ ಎಂದು ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಆಡಳಿತ ಮತ್ತು ವಿಧಾನಮಂಡಲದ ನಿರ್ಧಾರಗಳು ಸ್ವತಂತ್ರವಾಗಿ ನಡೆಯಬೇಕು ಎಂಬುದೇ ಸಂವಿಧಾನದ ಆಶಯವಾಗಿದ್ದು, ಹೈಕಮಾಂಡ್‌ ಹಸ್ತಕ್ಷೇಪದ ವಿರುದ್ಧ ಬಿಜೆಪಿ ಧ್ವನಿ ಎತ್ತಲಿದೆ ಎಂದು ಅವರು ತಿಳಿಸಿದ್ದಾರೆ.

Editor Reporter
kannadasakshi.in

ದೆಹಲಿ ಹೈಕಮಾಂಡ್‌ ಹಿಡಿತಕ್ಕೆ ರಾಜ್ಯ ಕಾಂಗ್ರೆಸ್‌: ವಿಜಯೇಂದ್ರ ಕಿಡಿ

ಬೆಂಗಳೂರು: ಸಚಿವರ ಆಯ್ಕೆಯಿಂದ ಹಿಡಿದು ಅವರಿಗೆ ಖಾತೆ ಹಂಚಿಕೆ ಮಾಡುವವರೆಗೂ ದೆಹಲಿಯ ಕಾಂಗ್ರೆಸ್‌ ಹೈಕಮಾಂಡ್‌ ಅನುಮೋದನೆ ಪಡೆಯಬೇಕಾದ ಪರಿಸ್ಥಿತಿ ರಾಜ್ಯದಲ್ಲಿ ನಿರ್ಮಾಣವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ. ಮುಖ್ಯಮಂತ್ರಿಗಳು ಪದೇಪದೆ ದೆಹಲಿಗೆ ತೆರಳಿ ಹೈಕಮಾಂಡ್‌ ಒಪ್ಪಿಗೆ ಪಡೆಯುತ್ತಿರುವುದು ರಾಜ್ಯದ ರಾಜಕೀಯ ಇತಿಹಾಸದಲ್ಲೇ ಅಪರೂಪದ ಬೆಳವಣಿಗೆ ಎಂದು ಅವರು ಟೀಕಿಸಿದ್ದಾರೆ.

ವಿಧಾನಸಭೆಯ ಸ್ಪೀಕರ್‌, ಉಪಸಭಾಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿ, ಉಪಸಭಾಪತಿ ಹುದ್ದೆಗಳ ವಿಚಾರದಲ್ಲೂ ಎಐಸಿಸಿ ಲೆಟರ್‌ಹೆಡ್‌ನಲ್ಲಿ ನಿರ್ದೇಶನ ನೀಡಿರುವುದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ ಎಂದು ವಿಜಯೇಂದ್ರ ಹೇಳಿದ್ದಾರೆ. ವಿಧಾನಮಂಡಲದ ಪ್ರಮುಖ ಹುದ್ದೆಗಳ ಬಗ್ಗೆ ಹೊರಗಿನಿಂದ ನಿರ್ದೇಶನ ನೀಡುವುದು ಸರಿಯಾದ ಕ್ರಮವಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಇಂತಹ ಬೆಳವಣಿಗೆಗಳು ವಿಧಾನಮಂಡಲದ ಸ್ವಾಯತ್ತತೆಗೆ ಧಕ್ಕೆ ತರುವುದಲ್ಲದೆ, ಪ್ರಜಾಪ್ರಭುತ್ವದ ಮೌಲ್ಯಗಳಿಗೂ ಅಪಾಯ ಉಂಟುಮಾಡುತ್ತವೆ ಎಂದು ವಿಜಯೇಂದ್ರ ಹೇಳಿದ್ದಾರೆ. ರಾಜ್ಯದ ಆಡಳಿತ ಮತ್ತು ವಿಧಾನಮಂಡಲದ ನಿರ್ಧಾರಗಳು ಸ್ವತಂತ್ರವಾಗಿ ನಡೆಯಬೇಕು ಎಂಬುದೇ ಸಂವಿಧಾನದ ಆಶಯವಾಗಿದ್ದು, ಹೈಕಮಾಂಡ್‌ ಹಸ್ತಕ್ಷೇಪದ ವಿರುದ್ಧ ಬಿಜೆಪಿ ಧ್ವನಿ ಎತ್ತಲಿದೆ ಎಂದು ಅವರು ತಿಳಿಸಿದ್ದಾರೆ.

Share ePaper Clip

Preparing image...

   SHARE  

Facebook
Twitter
Telegram
WhatsApp

   TOP NEWS  

   RECENT NEWS