ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಪಿಂಚಣಿ ಪಡೆಯುತ್ತಿರುವ ಲಕ್ಷಾಂತರ ಫಲಾನುಭವಿಗಳಿಗೆ ಕರ್ನಾಟಕ ಸರ್ಕಾರ ಮಹತ್ವದ ಸೂಚನೆ ನೀಡಿದೆ. ಸೂಕ್ತ ದಾಖಲೆಗಳಿಲ್ಲದ ಹಾಗೂ ಅನುಮಾನಾಸ್ಪದವೆಂದು ಗುರುತಿಸಲಾದ 17.97 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಸಾಮಾಜಿಕ ಭದ್ರತೆ ಮತ್ತು ಪಿಂಚಣಿಗಳ ಆಯುಕ್ತಾಲಯ ನೋಟಿಸ್ ಜಾರಿ ಮಾಡಿದೆ.
ನೋಟಿಸ್ ಪಡೆದಿರುವ ಫಲಾನುಭವಿಗಳು ಮುಂದಿನ 30 ದಿನಗಳೊಳಗೆ ತಮ್ಮ ಅರ್ಹತೆಯನ್ನು ಸಾಬೀತುಪಡಿಸುವ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕಾಗಿದೆ. ದಾಖಲೆಗಳ ಪರಿಶೀಲನೆಯ ಬಳಿಕ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಮುಂದುವರಿಸಲು ಕ್ರಮ ಕೈಗೊಳ್ಳಲಾಗುತ್ತದೆ.
ನಿಗದಿತ ಅವಧಿಯೊಳಗೆ ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೆ ಅಂತಹವರ ಸಾಮಾಜಿಕ ಭದ್ರತಾ ಪಿಂಚಣಿಯನ್ನು ರದ್ದುಗೊಳಿಸುವ ಕ್ರಮಕ್ಕೆ ಇಲಾಖೆ ಮುಂದಾಗಲಿದೆ. ಹೀಗಾಗಿ ನೋಟಿಸ್ ಪಡೆದಿರುವ ಫಲಾನುಭವಿಗಳು ಯಾವುದೇ ವಿಳಂಬ ಮಾಡದೆ ಅಗತ್ಯ ದಾಖಲೆಗಳನ್ನು ಸಲ್ಲಿಸುವುದು ಮುಖ್ಯವಾಗಿದೆ.










