ಸ್ಯಾಂಡಲ್ವುಡ್ನಲ್ಲಿ ವಿಭಿನ್ನ ಶೀರ್ಷಿಕೆಯ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿರುವ ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಚಿತ್ರತಂಡದಿಂದ ಹೊಸ ಅಪ್ಡೇಟ್ ಹೊರಬಿದ್ದಿದೆ. ವಿಭಿನ್ನ ಕಥಾಹಂದರ ಹೊಂದಿರುವ ಈ ಕಾಮಿಡಿ ಥ್ರಿಲ್ಲರ್ ಡ್ರಾಮಾ ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಈಗಾಗಲೇ ಕುತೂಹಲ ಮೂಡಿದೆ.
ಮಹಾನ್ ಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಪ್ರತೀತ್ ಅಕ್ಕಿ ನಿರ್ಮಿಸಿರುವ ಈ ಸಿನಿಮಾದ ‘ಕಡ್ಲೆ ಬೀಜ ಕಿತ್ತುಕೊಂಡ್ ಹೋದ್ಲು’ ಎಂಬ ಮಜವಾದ ಲಿರಿಕಲ್ ವಿಡಿಯೋ ಹಾಡು ಯೂಟ್ಯೂಬ್ನಲ್ಲಿ ಬಿಡುಗಡೆಯಾಗಿದೆ. ಹಾಡಿನ ವಿಭಿನ್ನ ಸಾಹಿತ್ಯ ಹಾಗೂ ಮನರಂಜನೆಯ ಶೈಲಿ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.
ಹಾಡು ಬಿಡುಗಡೆಯಾದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸಿನಿಮಾದ ಕಥೆ, ಪಾತ್ರಗಳು ಹಾಗೂ ಹಾಸ್ಯಮಯ ಸನ್ನಿವೇಶಗಳ ಬಗ್ಗೆ ನಿರೀಕ್ಷೆ ಹೆಚ್ಚಾಗಿದ್ದು, ‘ಕಡ್ಲೆ ಬೀಜ ಕಿತ್ತುಕೊಂಡ್ ಹೋದ್ಲು’ ಹಾಡು ಚಿತ್ರತಂಡಕ್ಕೆ ಮತ್ತಷ್ಟು ಪ್ರಚಾರ ತಂದುಕೊಟ್ಟಿದೆ.










