ಯುವಜನತೆಗೆ ಉತ್ತಮ ರಾಜಕೀಯ ವ್ಯವಸ್ಥೆಯನ್ನು ಹಸ್ತಾಂತರಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ದೇಶದ ಭವಿಷ್ಯ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸಿದ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನ್ ರಾಮ್ ಅವರಿಗೆ ಗೌರವ ಸಲ್ಲಿಸಿದ ಅವರು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿದೆ ಎಂದರು.
12ನೇ ಶತಮಾನದಲ್ಲಿ ರಾಜ್ಯದಲ್ಲಿ ಹೊಸ ಸಾಮಾಜಿಕ ಪ್ರಯತ್ನವಾಗಿ ಅನುಭವ ಮಂಟಪ ಆರಂಭವಾಯಿತು. ಅಣ್ಣ ಬಸವಣ್ಣನವರು ಸಮಾನತೆಯನ್ನು ಪ್ರತಿಪಾದಿಸಿದ್ದು, ಅಲ್ಲಮಪ್ರಭು ಅವರ ಅಧ್ಯಕ್ಷತೆಯಲ್ಲಿ ಅನುಭವ ಮಂಟಪ ನಡೆದಿತ್ತು. ಜಾತಿ ಹಾಗೂ ವಿವಿಧ ಪಂಗಡಗಳ ಜನರಿಗೆ ಧ್ವನಿ ನೀಡುವುದು, ಅವರ ಭಾವನೆಗಳನ್ನು ಅರ್ಥಮಾಡಿಕೊಳ್ಳುವುದು ಉತ್ತಮ ಆಡಳಿತಕ್ಕೆ ಅಗತ್ಯ ಎಂದು ಪರಮೇಶ್ವರ್ ಹೇಳಿದರು.
ಭಾರತದ ಪ್ರಜಾಪ್ರಭುತ್ವದ ಅಡಿಪಾಯ ಗಟ್ಟಿಯಾಗಿರುವುದರಿಂದಲೇ ಇಂದು ನಾವು ಸಮಾನತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅನುಸರಿಸಿ ಬದುಕುತ್ತಿದ್ದೇವೆ ಎಂದು ಅವರು ಅಭಿಪ್ರಾಯಪಟ್ಟರು. ಈ ಮೌಲ್ಯಗಳನ್ನು ಉಳಿಸಿಕೊಂಡು, ಯುವಜನತೆಗೆ ಉತ್ತಮ ರಾಜಕೀಯ ವ್ಯವಸ್ಥೆಯನ್ನು ನೀಡುವುದು ಇಂದಿನ ಪೀಳಿಗೆಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.










