ಪಾಪರಾಜಿಗಳ ಮೇಲೆ ಮೌನಿ ರಾಯ್ ಆಕ್ರೋಶ; ‘ವಿಡಿಯೋ ನಿಲ್ಲಿಸಿ’ ಎಂದು ಕಿಡಿ

ಬಾಲಿವುಡ್ ನಟಿ ಮೌನಿ ರಾಯ್ ಮುಂಬೈನಲ್ಲಿ ಪಾಪರಾಜಿಗಳ ವರ್ತನೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರಿನೊಳಗೆ ಕುಳಿತಿದ್ದರೂ ನಿರಂತರವಾಗಿ ಕ್ಯಾಮೆರಾ ಹಿಡಿದು ಚಿತ್ರೀಕರಣ ನಡೆಸುತ್ತಿದ್ದ ಫೋಟೋಗ್ರಾಫರ್‌ಗಳ ವಿರುದ್ಧ ಆಕ್ರೋಶಗೊಂಡ ಅವರು, “ವಿಡಿಯೋ ಮಾಡುವುದನ್ನು ನಿಲ್ಲಿಸಿ” ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳವಾರ ರಾತ್ರಿ ಮುಂಬೈನ ಬಾಂದ್ರಾದಲ್ಲಿರುವ ರೆಸ್ಟೋರೆಂಟ್‌ನಿಂದ ತಮ್ಮ ಆಪ್ತ ಗೆಳತಿ ಹಾಗೂ ನಟಿ ಅನುಷಾ ದಾಂಡೇಕರ್ ಅವರೊಂದಿಗೆ ಹೊರಬಂದ ವೇಳೆ ಈ ಘಟನೆ ನಡೆದಿದೆ. ಕಾರಿನತ್ತ ತೆರಳುತ್ತಿದ್ದ ಮೌನಿ ರಾಯ್ ಅವರನ್ನು ಪಾಪರಾಜಿಗಳು ಸುತ್ತುವರಿದು ನಿರಂತರವಾಗಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣ ನಡೆಸಿದ ಕಾರಣ ಅವರು ಅಸಮಾಧಾನ ವ್ಯಕ್ತಪಡಿಸಿದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರಿಂದ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರು ಖಾಸಗಿತನಕ್ಕೆ ಗೌರವ ನೀಡಬೇಕು ಎಂದು ಮೌನಿ ರಾಯ್ ಅವರನ್ನು ಬೆಂಬಲಿಸಿದರೆ, ಇನ್ನೂ ಕೆಲವರು ಸೆಲೆಬ್ರಿಟಿಗಳ ಜೀವನದಲ್ಲಿ ಇಂತಹ ಘಟನೆಗಳು ಸಾಮಾನ್ಯವೆಂದು ಅಭಿಪ್ರಾಯಪಟ್ಟಿದ್ದಾರೆ.

   SHARE  

Facebook
Twitter
Telegram
WhatsApp

   TOP NEWS  

   RECENT NEWS