ಭಾರತದ ಉದಯೋನ್ಮುಖ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರ ಅಂತರರಾಷ್ಟ್ರೀಯ ಪಾದಾರ್ಪಣೆ ನಿರ್ವಹಣೆ ಕುರಿತು ಮಾಜಿ ವಿಕೆಟ್ ಕೀಪರ್-ಬ್ಯಾಟರ್ ದಿನೇಶ್ ಕಾರ್ತಿಕ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಯುವ ಆಟಗಾರನ ವಿಚಾರದಲ್ಲಿ ಸರಿಯಾದ ಯೋಜನೆ ಅನುಸರಿಸಿಲ್ಲ ಎಂದು ಟೀಕಿಸಿದ ಅವರು, “ಅವರು ಸಂಪೂರ್ಣವಾಗಿ ತಪ್ಪು ದಾರಿ ತುಳಿದಿದ್ದಾರೆ” ಎಂದು ಹೇಳಿದ್ದಾರೆ.
ಸ್ಕೈ ಸ್ಪೋರ್ಟ್ಸ್ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕಾರ್ತಿಕ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ನಡುವಿನ ಸಮನ್ವಯದ ಕೊರತೆಯನ್ನು ಪ್ರಶ್ನಿಸಿದರು. ಈ ಕಾರಣದಿಂದಲೇ ವೈಭವ್ ಸೂರ್ಯವಂಶಿ ಅವರ ಪಾದಾರ್ಪಣೆ ಸರಿಯಾಗಿ ನಿರ್ವಹಣೆಯಾಗಿಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಇಂಗ್ಲೆಂಡ್ನಂತಹ ಕಠಿಣ ಸರಣಿಗಿಂತ ಮೊದಲು ಐರ್ಲೆಂಡ್ ವಿರುದ್ಧ ಅವಕಾಶ ನೀಡಿದ್ದರೆ ಯುವ ಆಟಗಾರನಿಗೆ ಹೆಚ್ಚು ಅನುಕೂಲವಾಗುತ್ತಿತ್ತು ಎಂದರು.
ತಂಡದಲ್ಲಿ ಸೀನಿಯರ್ ಹಾಗೂ ಜೂನಿಯರ್ ಆಟಗಾರರನ್ನು ರೊಟೇಟ್ ಮಾಡುವ ಕುರಿತು ಸ್ಪಷ್ಟವಾದ ಯೋಜನೆ ಮತ್ತು ಮಾರ್ಗಸೂಚಿಗಳ ಕೊರತೆ ಕಂಡುಬರುತ್ತಿದೆ ಎಂದು ದಿನೇಶ್ ಕಾರ್ತಿಕ್ ಹೇಳಿದರು. ಯುವ ಪ್ರತಿಭೆಗಳನ್ನು ಬೆಳೆಸಲು ಸೂಕ್ತ ಸಮಯದಲ್ಲಿ ಸರಿಯಾದ ಅವಕಾಶ ನೀಡುವುದು ಅತ್ಯಗತ್ಯ ಎಂದು ಅವರು ಸಲಹೆ ನೀಡಿದರು.










