ಬ್ಯಾಂಕಾಕ್ನಲ್ಲಿ ಮೂವರು ಭಾರತೀಯರನ್ನು ಅಪಹರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಐವರು ಭಾರತೀಯರನ್ನು ಥಾಯ್ ಪೊಲೀಸರು ಬಂಧಿಸಿದ್ದಾರೆ. ಮಂಗಳವಾರ ದೇಶದಿಂದ ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಬ್ಯಾಂಕಾಕ್ನ ಖ್ಲಾಂಗ್ ಟಾನ್ ಜಿಲ್ಲೆಯ ಹೋಟೆಲ್ನಲ್ಲಿ ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರಿದಿದೆ.
ತನಿಖಾಧಿಕಾರಿಗಳ ಪ್ರಕಾರ, ಆರೋಪಿಗಳು ರಜಾ ಪ್ಯಾಕೇಜ್ನ ನೆಪದಲ್ಲಿ ಮೂವರು ಭಾರತೀಯರನ್ನು ಥೈಲ್ಯಾಂಡ್ಗೆ ಕರೆಸಿಕೊಂಡಿದ್ದರು. ಬಳಿಕ ಅವರನ್ನು ಬಂಧನದಲ್ಲಿರಿಸಿ ಸುಲಿಗೆಗಾಗಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಈ ಪ್ರಕರಣದ ಹಿನ್ನೆಲೆ ಹಾಗೂ ಆರೋಪಿಗಳ ಉದ್ದೇಶದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಬಂಧಿತರನ್ನು ಅವತಾರ್ ಸಿಂಗ್ (38), ಜಗಜಿತ್ ಸಿಂಗ್ (38), ರಾಮಬಾಲಕ್ ಕುಮಾರ್ (24), ಸುಖಬೀರ್ ಸಿಂಗ್ (37) ಮತ್ತು ಕುಲ್ರಾ ಸಿಂಗ್ (27) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದಿರುವ ಪೊಲೀಸರು ಅಪಹರಣದಲ್ಲಿ ಇನ್ನಷ್ಟು ಮಂದಿ ಭಾಗಿಯಾಗಿದ್ದಾರೆಯೇ ಹಾಗೂ ಹಣದ ಬೇಡಿಕೆಯ ಕುರಿತು ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ.










