ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಸಚಿವ ಎನ್. ಚಲುವರಾಯಸ್ವಾಮಿ ತೀವ್ರ ವ್ಯಂಗ್ಯವಾಡಿದ್ದಾರೆ. “ಕುಮಾರಸ್ವಾಮಿ ಅವರಿಗೆ ರಾತ್ರಿ ಹೊತ್ತು ನಿದ್ರೆ ಬರುತ್ತಿಲ್ಲ. ಒಂದು ಕಡೆ ಮಗ್ಗಲು ಬದಲಿಸಿದರೆ ಸಿಎಂ ಡಿ.ಕೆ. ಶಿವಕುಮಾರ್ ಕಾಣಿಸುತ್ತಾರೆ, ಮತ್ತೊಂದು ಕಡೆ ಹೊರಳಿದರೆ ನಾನು ಮತ್ತು ಬಾಲಕೃಷ್ಣ ಕಾಣುತ್ತೇವೆ” ಎಂದು ಟಾಂಗ್ ನೀಡಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ತಾವು ನೀರಾವರಿ ಸಚಿವರಾಗಿರುವುದನ್ನು ಕುಮಾರಸ್ವಾಮಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ. “ಅವರ ಹೊಟ್ಟೆನೋವಿಗೆ ನಾನು ಔಷಧಿ ನೀಡಲು ಆಗುವುದಿಲ್ಲ” ಎಂದು ವ್ಯಂಗ್ಯವಾಗಿ ಪ್ರತಿಕ್ರಿಯಿಸಿದ್ದಾರೆ.
ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದೆಹಲಿ ಮೂಲಕ ತಮಿಳುನಾಡಿಗೆ ನೀರು ಹರಿಸುತ್ತಿದ್ದರೇ ಎಂದು ಪ್ರಶ್ನಿಸಿದ ಚಲುವರಾಯಸ್ವಾಮಿ, ರಾಜ್ಯದ ನೀರಾವರಿ ಸಮಸ್ಯೆಗಳ ಕುರಿತು ಚರ್ಚಿಸಲು ತಾವು ಎರಡು ದಿನಗಳ ಕಾಲ ದೆಹಲಿ ಪ್ರವಾಸ ಕೈಗೊಂಡಿದ್ದಾಗಿ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕುಮಾರಸ್ವಾಮಿ ಅವರ ಆರೋಪಗಳಿಗೆ ಸಚಿವರು ತಿರುಗೇಟು ನೀಡಿದ್ದಾರೆ.










