ಬೆಂಗಳೂರು: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನ ಪೂರೈಸಿದ ಹಿನ್ನೆಲೆಯಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಡಿಕೆಶಿ ನೇತೃತ್ವದ ಸರ್ಕಾರ ಸರಿದಾರಿಯಲ್ಲಿ ಸಾಗುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಆದರೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾಷಣ ಆರಂಭಿಸಿ ಡಿಜಿಟಲ್ ಪ್ರಾತ್ಯಕ್ಷಿಕೆಯೊಂದಿಗೆ ಮಾತನಾಡುತ್ತಿದ್ದ ವೇಳೆ ಸಿದ್ದರಾಮಯ್ಯ ಕಾರ್ಯಕ್ರಮದಿಂದ ಮಧ್ಯದಲ್ಲೇ ನಿರ್ಗಮಿಸಲು ಮುಂದಾದರು. ಸಿದ್ದರಾಮಯ್ಯ ಎದ್ದು ಹೊರಡುತ್ತಿರುವುದನ್ನು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಡಿಕೆಶಿ ಗಮನಕ್ಕೆ ತಂದರು.
ಕೂಡಲೇ ಭಾಷಣವನ್ನು ನಿಲ್ಲಿಸಿದ ಡಿ.ಕೆ. ಶಿವಕುಮಾರ್ ವೇದಿಕೆಯಲ್ಲೇ ಸಿದ್ದರಾಮಯ್ಯ ಅವರ ಬಳಿಗೆ ತೆರಳಿ ಬಾಗಿ ಕಾಲು ಮುಟ್ಟಿ ನಮಸ್ಕರಿಸಿದರು. ಇಬ್ಬರು ನಾಯಕರ ನಡುವಿನ ಈ ಕ್ಷಣ ಕಾರ್ಯಕ್ರಮದಲ್ಲಿ ವಿಶೇಷ ಗಮನ ಸೆಳೆಯಿತು.










